ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಇಲ್ಲ..!

ಬೆಂಗಳೂರು:

     ನಿನ್ನೆ ಬೆಳಿಗ್ಗೆಯಷ್ಟೇ ಪೆಟ್ರೋಲ್ ಮಾರಾಟ ತೆರಿಗೆಯನ್ನು ಶೇ 3.25 ಮತ್ತು ಡೀಸೆಲ್ ಮಾರಾಟ ತೆರಿಗೆಯನ್ನು ಶೇ 3.27 ಇಳಿಕೆ ಮಾಡಲು ತೀರ್ಮಾನಿಸಿ ಜನಸಾಮಾನ್ಯರಿಗೆ ಕೊಂಚ ಖುಷಿ ನೀಡಿದ್ದ ಸರ್ಕಾರ, ರಾತ್ರಿ ವೇಳೆಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಆಘಾತ ನೀಡಿತ್ತು. ಆದರೆ, ಸ್ವಲ್ಪ ಹೊತ್ತಿನಲ್ಲಿಯೇ ಕುಮಾರಸ್ವಾಮಿ ದರ ಏರಿಕೆಗೆ ಬ್ರೇಕ್ ಹಾಕಿದ್ದಾರೆ.

      ಸಾರಿಗೆ ಸಂಸ್ಥೆಯ  ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರವನ್ನು ಶೇ.18ರಷ್ಟು ಹೆಚ್ಚಿಸುವ ಸಾರಿಗೆ ಇಲಾಖೆಯ ಪ್ರಸ್ತಾವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮುಂದಿತ್ತು. ಆದರೆ, ಕುಮಾರಸ್ವಾಮಿ ಆ ಆದೇಶಕ್ಕೆ ಕೂಡಲೇ ತಡೆ ನೀಡುವಂತೆ ಸೂಚಿಸಿದ್ದಾರೆ.

      ದಿನದಿಂದ ದಿನಕ್ಕೆ ತೈಲಬೆಲೆ ಏರಿಕೆಯಾಗುತ್ತಿರುವುದರಿಂದ ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ನಷ್ಟದಲ್ಲಿರುವ ನಿಗಮಗಳನ್ನು ನಡೆಸಲು ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದರು. 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link