ಅಂತಿಮ ಹಂತಕಕೆ ತಲುಪಿದ ಪ್ರಭುತ್ವ’ ಚಿತ್ರದ ಚಿತ್ರೀಕರಣ

       ರವಿರಾಜ್.ಎಸ್.ಕುಮಾರ್ ಅವರು ನಿರ್ಮಿಸುತ್ತಿರುವ `ಪ್ರಭುತ್ವ` ಚಿತ್ರಕ್ಕೆ ಸಕಲೇಶಪುರದಲ್ಲಿ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಬೆಂಗಳೂರು, ಮೈಸೂರು ಮುಂತಾದಕಡೆ ಚಿತ್ರೀಕರಣ ನಡೆದಿದೆ. ಮೇಘಡಹಳ್ಳಿ ಶಿವಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಆರ್.ರಂಗನಾಥ್  ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ  ಎಮಿಲ್ ಸಂಗೀತ ನೀಡಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ವಿನೋದ್, ಮಾಸ್‍ಮಾದ, ವಿಕ್ರಂ ಸಾಹಸ ನಿರ್ದೇಶನ, ಮೋಹನ್, ಕಲೈ, ಮುರಳಿ ನೃತ್ಯ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ನರಸಿಂಹ ಜಾಲಹಳ್ಳಿ, ಸುಧೀರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಹಾಡುಗಳನ್ನು ಕವಿರಾಜ್, ಡಾ||ವಿ.ನಾಗೇಂದ್ರಪ್ರಸಾದ್, ಚೇತನ್‍ಕುಮಾರ್(ಭರ್ಜರಿ), ಅಲೆಮಾರಿ ಸಂತು ರಚಿಸಿದ್ದಾರೆ. ಸಂಭಾಷಣೆಯನ್ನು ವಿನಯ್ ಬರೆದಿದ್ದಾರೆ.

ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಪಾವನ. ನಾಜರ್, ಶಶಿಕುಮಾರ್, ಸಾಧುಕೋಕಿಲ, ಮುನಿ, ಪೆಟ್ರೋಲ್ ಪ್ರಸನ್ನ, ಶರತ್ ಲೋಹಿತಾಶ್ವ, ಆದಿಲೋಕೇಶ್, ಗಿರಿ, ಹರೀಶ್ ರೈ, ಪೂಜಾಲೋಕೇಶ್, ಅವಿನಾಶ್, ವೀಣಾಸುಂದರ್, ವಿಜಯ್ ಚೆಂಡೂರ್, ಅಮಿತಾ ಕುಲಾಳ್, ಅನಿತಾ ಭಟ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Recent Articles

spot_img

Related Stories

Share via
Copy link
Powered by Social Snap