ರಾಯಚೂರು:
ಅಕ್ರಮವಾಗಿ ಸಂಗ್ರಹಿಸಲಾಗಿಟ್ಟಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಚೀಲಗಳನ್ನು ನಗರದ ಗದ್ವಾಲ ರಸ್ತೆಯಲ್ಲಿಯ ರೈಸ್ ಮಿಲ್ನಲ್ಲಿ ಸಂಗ್ರಹಿಸಿದ್ದ ಅನ್ನಭಾಗ್ಯದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ರಾಯಚೂರಿನ ನರಸರೆಡ್ಡಿ ಅವರಿಗೆ ಸೇರಿದ ನರಸಿಂಹ ರೈಸ್ ಮಿಲ್ನಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಈ ಕುರಿತು ಮಾಹಿತಿ ತಿಳಿದುಬಂದ ಬಳಿಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಭಾರಿ ಉಪನಿರ್ದೇಶಕ ಎನ್. ಅಮರಣ್ಣ ಹಾಗೂ ಇನ್ಸ್ಪೆಕ್ಟರ್ ವೆಂಕಣ್ಣ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಸುಮಾರು 650 ಬ್ಯಾಗ್ ಅಕ್ಕಿಯನ್ನು ಸಹ ವಶಕ್ಕೆ ಪಡೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ