ದೆಹಲಿ :
ಬಿಜೆಪಿ ಪ್ರಧಾನ ಕಚೇರಿಯಿಂದ ಸ್ಮೃತಿ ಸ್ಥಳದತ್ತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ಪಯಣ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮೆರವಣಿಗೆಯ ನೇತೃತ್ವ ವಹಿಸಿಕೊಂಡಿದ್ದಾರೆ.
ಬೆಳಗ್ಗೆ ವಾಜಪೇಯಿ ಅವರ ನಿವಾಸದಿಂದ ಬಿಜೆಪಿ ಪ್ರಧಾನ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗಿತ್ತು. ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ದೇಶ ವಿದೇಶಗಳಿಂದ ಬಂದ ಸಾವಿರಾರು ಮಂದಿ ಅಭಿಮಾನಿಗಳು, ಗಣ್ಯರು ಅಟಲ್ಜೀ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ನಾಲ್ಕು ಕಿ.ಮೀ.ದೂರ ಮೆರವಣಿಗೆ ಸಾಗಲಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಅಭಿಮಾನಿಗಳು ನೆರೆದಿದ್ದು ನೆಚ್ಚಿನ ನಾಯಕನಿಗೆ ವಿದಾಯ ಹೇಳುತ್ತಿದ್ದಾರೆ. ಮೆರವಣಿಗೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ