ಹರಪನಹಳ್ಳಿ :
ತಾಲೂಕಿನ ಅಲಗಿಲವಾಡ ಗ್ರಾಮದ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಲೇಶ್ ಪಾಟೀಲ್ (21) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗ್ರಾಮದ ಪ್ರಭುದೇವ ಪಾಟೀಲ್ ಅವರ ಪುತ್ರ ಹಾಲೇಶ್ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ನಲ್ಲಿ ತೃತೀಯ ಸೆಮಿಷ್ಟರ್ ವ್ಯಾಸಂಗ ಮಾಡುತ್ತಿದ್ದ. ಶಿರಸಿ ಸಮೀಪದ ಸಿದ್ದಾಪುರದ ಬಳಿ ಕಾರು ಅಪಘಾತದಲ್ಲಿ ಗುರುವಾರ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಸ್ವ-ಗ್ರಾಮದಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ