ಡಿಕೆಶಿ, ಹೆಚ್.ಡಿ.ರೇವಣ್ಣ ಮೈತ್ರಿ ಸರ್ಕಾರದ ಕಮಿಷನ್ ಏಜೆಂಟ್ ಗಳು : ಯಡಿಯೂರಪ್ಪ

ಬೆಂಗಳೂರು:

       ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕಮಿಷನ್ ಏಜೆಂಟರಿಂದ ಈ ಸರ್ಕಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 

       ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 8 ರಿಂದ 10 ಪರ್ಸೆಂಟ್ ಇಲ್ಲದೆ ನೀರಾವರಿ ಇಲಾಖೆ ಬಿಲ್ ಬಿಡುಗಡೆ ಆಗುತ್ತಿಲ್ಲ. ಲೋಕೋಪಯೋಗಿ ಇಲಾಖೆ ಸಚಿವರು ಕಮಿಷನ್ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ. ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಎಚ್‌.ಡಿ.ರೇವಣ್ಣ ಮೈತ್ರಿ ಸರ್ಕಾರದ ಕಮಿಷನ್‌ ಏಜೆಂಟ್‌ಗಳು ಎಂದು ಆರೋಪಿಸಿದರು.

       ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ಸಿದ್ಧತೆ ನಡೆಸುತ್ತಿದ್ದು, ಹಿಂದುಳಿದ ವರ್ಗಗಳ ಜನರನ್ನು ಸೆಳೆಯಬೇಕಿದೆ. ಸಂಘಟನೆ ಬಲಪಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದ ವೈಫಲ್ಯತೆ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕು. 15-20 ದಿನಗಳಲ್ಲಿ ಹೋರಾಟದ ಬಗ್ಗೆ ರೂಪುರೇಷೆ ರಚಿಸಲಾಗುವುದು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap