ಕುಡಿದು ಸ್ಕೂಲ್​ ಬಸ್​ ಚಾಲನೆ, 13 ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು:

  ಸ್ಕೂಲ್​ ಬಸ್​ಗೆ ಮತ್ತೊಂದು ಸ್ಕೂಲ್​ ಬಸ್​ ಡಿಕ್ಕಿ ಹೊಡೆದು 13 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಬಾಗಲೂರಿನಲ್ಲಿ ನಡೆದಿದೆ. ಡೆಲ್ಲಿ ಪಬ್ಲಿಕ್ ಸ್ಕೂಲ್​ನ ಬಸ್​ ಚಾಲಕ ಕುಡಿದ ಅಮಲಿನಲ್ಲಿ ಬಸ್​ ಚಲಾಯಿಸಿ ನಾಗಾರ್ಜುನ ಕಾಲೇಜ್ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ.

  ಕುಡಿದು ಬಸ್​ ಚಲಾಯಿಸಿಕೊಂಡು ಬಂದ ಚಾಲಕ ಮೊದಲು ಬಾಗಲೂರು ಸಂತೆ ಬಳಿ ರಸ್ತೆ ಪಕ್ಕ ನಿಂತಿದ್ದ ನಾಗಾರ್ಜುನ ಕಾಲೇಜ್ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಮುಂದೆ ತೆರಳಿ ಟ್ರಾನ್ಸ್ ಫಾರ್ಮರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಿತೀಶ್ ಎಂಬ ವಿದ್ಯಾರ್ಥಿ ಕಾಲು ಮುರಿದಿದೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಎಸ್ಕೇಪ್ ಆಗಿದ್ದಾನೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap