ಬೆಂಗಳೂರು :
ಇತ್ತಿಚೆಗಷ್ಠೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಸಿದ್ಧರಾಗಿರುವ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಅವರು ತಮ್ಮೆಲ್ಲ ಸ್ಪರ್ಧಾಳುಗಳಿಗಿಂತ ಮುಂದಿದ್ದಾರೆ ಎಂದು ಇಂಡಿಯಾ ಟುಡೇ – ಆಕ್ಸಿಸ್ – ಮೈ ಇಂಡಿಯಾ ಪಾಲಿಟಿಕಲ್ ಸ್ಟಾಕ್ ಎಕ್ಸ್ ಚೇಂಜ್ ಸಮೀಕ್ಷೆ. ಐದು ವರ್ಷಗಳ ಅಧಿಕಾರಾವಧಿ ಮುಗಿಯಲು ಇನ್ನೂ ಎಂಟು ತಿಂಗಳು ಬಾಕಿ ಇರುವಾಗಲೇ, ಸೆಪ್ಟೆಂಬರ್ 6ರಂದು ವಿಧಾನಸಭೆ ವಿಸರ್ಜಿಸಿ ಚುನಾವಣೆಯ ಪಾಂಚಜನ್ಯ ಊದಿದ ಕೆ.ಸಿ..ಆರ್ ನಡೆ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳು ಬಾಕಿಯಿರುವಾಗಲೇ ತೆಲಂಗಾಣ ರಾಷ್ಟ್ರ ಸಮಿತಿಯ ಅಧ್ಯಕ್ಷ ಕೆ.ಸಿ.ಆರ್ ಅವರು ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಮುಕ್ತಕಂಠದಿಂದ ಹೊಗಳುತ್ತಿದ್ದು, ಬಿಜೆಪಿ ಜೊತೆ ಕೈಜೋಡಿಸುವ ಎಲ್ಲ ಲಕ್ಷಣಗಳು ನಿಚ್ಚಳವಾಗಿವೆ.