ಡಿ.ಕೆ.ಶಿ., ಐ.ಟಿ.ದಾಳಿ ಪ್ರಕರಣ : 15 ನಿಮಿಷ ವಿಚಾರಣೆ ಮುಂದೂಡಿದ ನ್ಯಾಯಾಲಯ

 ಬೆಂಗಳೂರು:  

      ದೆಹಲಿಯ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ಐ.ಟಿ.ಇಲಾಖೆ ನೋಟೀಸ್ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು 15 ನಿಮಿಷಗಳ ಕಾಲ ನ್ಯಾಯಾಧೀಶರು ಮುಂದೂಡಿದ್ದಾರೆ.

      ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು ನ್ಯಾಯಾಲಯವು 15 ನಿಮಿಷಗಳ ಕಾಲ ಮುಂದೂಡಿ ಆದೇಶಿಸಿದೆ. ಇದರಿಂದಾಗಿ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಲಯದ ಸಭಾಂಗಣದಲ್ಲಿಯೇ ಆಸೀನರಾಗಿದ್ದರು.

      ಈ ಹಿಂದೆ ವಿಚಾರಣೆ ನಡೆಸಿದ ನ್ಯಾಯಾಲಯವು ಸೆಪ್ಟೆಂಬರ್ 20 ರಂದು ಪ್ರಕರಣವನ್ನು ಮುಂದೂಡಿ ಆದೇಶಿಸಿತ್ತು, ಆದರೆ, ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು 15 ರಂದೇ ನಡೆಸುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ ಮೇರೆಗೆ ನ್ಯಾಯಾಲಯವು 15 ರಂದು ವಿಚಾರಣೆ ನಡೆಸಲು ಅನುಮತಿ ನೀಡಿತ್ತು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap