ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಕಾರು ಚಾಲಕ ಸಾವು

ಬೆಂಗಳೂರು

      ವೇಗವಾಗಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಬಂಗಾರಪೇಟೆ ತಹಸೀಲ್ದಾರ್ ಸತ್ಯಪ್ರಕಾಶ್ ಅವರು ಹೆಬ್ಬಾಳದ ದೇವಿ ನಗರದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ.

       ಮತ್ತಿಕೆರೆಯ ಸತ್ಯಪ್ರಕಾಶ್ (43) ಅವರು ಬುಧವಾರ ತಡ ರಾತ್ರಿಯಲ್ಲಿ ಕೆಲಸ ಮುಗಿಸಿಕೊಂಡು ಕೋಲಾರದಿಂದ ಮುಂಜಾನೆ 4ರ ವೇಳೆ ಮತ್ತಿಕೆರೆಯ ಮನೆಗೆ ಸ್ಕೋಡಾ ಕಾರಿನಲ್ಲಿ ವೇಗವಾಗಿ ವಾಪಸ್ಸಾಗುತ್ತಿದ್ದರು.ಮಾರ್ಗ ಮಧ್ಯೆ ದೇವಿ ನಗರ ಕ್ರಾಸ್ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಲಾಯಿಸುತ್ತಿದ್ದ ಸತ್ಯಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

         ಪ್ರಕರಣ ದಾಖಲಿಸಿರುವ ಹೆಬ್ಬಾಳ ಸಂಚಾರ ಪೊಲೀಸ್ ಇನ್‍ಸ್ಪೆಕ್ಟರ್ ಪ್ರವೀಣ್ ಕುಮಾರ್ ಅವರು ಪ್ರಕರಣ ದಾಖಲಿಸಿ ಲಾರಿ ಚಾಲಕನಿಗಾಗಿ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ. ಮೃತ ಸತ್ಯಪ್ರಕಾಶ್ ಮನೆ ಕಚೇರಿಯ ಮೇಲೆ ಇತ್ತೀಚೆಗೆ ಅಕ್ರಮ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap