ಚಿಕ್ಕಮಗಳೂರು:
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ನದಿಯ ಪ್ರವಾಹದಿಂದ ಮೂರು ದಿನಗಳ ಕಾಲ ಶೃಂಗೇರಿ ಶೌಚಾಲಯವೊಂದರಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾಪಾಡುವಲ್ಲಿ ಎಎನ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾರ್ಮಿಕನಾದ ವಿನೋದ್ ಮಂಡ್ಲೆ ಶೌಚಾಲಯದಲ್ಲಿ ಕಳೆದ ಮೂರು ದಿನಗಳಿಂದ ಸಿಲುಕಿಕೊಂಡಿದ್ದ, ಶೃಂಗೇರಿಯ ಗಾಂಧಿ ಮೈಧಾನದಲ್ಲಿರುವ ಶೌಚಾಲಯಕ್ಕೆ ಮೂರು ದಿನಗಳ ಹಿಂದೆ ಹೋಗಿದ್ದ ವಿನೋದ್ ಮಂಡ್ಲೆ ಸಿಲುಕಿಕೊಂಡಿದ್ದ, ಈತ ಬಿಹಾರ ಮೂಲದ ಕಾರ್ಮಿಕನಾಗಿದ್ದಾನೆ. ಈತನನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ