ಹಾವೇರಿ:
ಬೆಂಗಳೂರಿನ ನಯನ ರಂಗಮಂದಿರದಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ 63ನೇ ಕನಾಟಕ ರಾಜ್ಯೋತ್ಸವ ಅಂಗವಾಗಿ ಗುರುವಾರ ನಡೆದ ರಾಷ್ಟ್ರೀಯ ನೃತ್ಯ ಕಲಾಮೇಳ-4 ಕಾರ್ಯಕ್ರಮದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾವೇರಿಯ ಕಲಾವಿದ ವಸಂತಕುಮಾರ ಕಡತಿ ಅವರಿಗೆ ಕನಾಟಕ ಕಲಾ ಜ್ಯೋತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಲಾ ಕ್ಷೇತ್ರದಲ್ಲಿ ಕಳೆದ ಹದಿನೈದು ವರ್ಷಗಳಿಂದ ಸಲ್ಲಿಸಿದ ಕಲಾ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯನ್ನು ಪ್ರತಿಷ್ಠಾನದ ಅಧ್ಯಕ್ಷ, ಚಲನಚಿತ್ರ ನಿರ್ದೇಶಕ ರಮೇಶ ಸುರ್ವೇ ಪ್ರದಾನ ಮಾಡಿದರು. ವೇದಿಕೆಯಲ್ಲಿ ಶ್ರೀ ಕಲ್ಮೇಶ್ವರ ಮಾಹಾಸ್ವಾಮಿಗಳು,ಸಾಹಿತಿ ಡಾ,ಮಹಾಂತೇಶ ಮಲ್ಲನಗೌಡರ, ಚಲನಚಿತ್ರ ಕಲಾವಿದ ಚಿಕ್ಕಹೆಜ್ಜಾಜಿ ಮಹಾದೇವ, ಕೆ.ಪಿ.ಎ. ಅಧ್ಯಕ್ಷ ಶಂಕರ ಪಾಟೀಲ, ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ