ರೈಲಿನಲ್ಲಿ ಕೋಟಿಗೂ ಅಧಿಕ ಹಣ ಪತ್ತೆ!!!

ಉಡುಪಿ: 

     ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 1.50 ಕೋ.ರೂಪಾಯಿ ಹಣವನ್ನು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ಬೆಳಗ್ಗಿನಜಾವ ಇಲ್ಲಿನ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

      ಮುಂಬೈಯಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ನೇತ್ರಾವತಿ ಎಕ್ಸ್‌ಪ್ರೆಸ್‌ (ನಂ.16345) ರೈಲಿನ ಎಸಿ ಬೋಗಿಯಲ್ಲಿದ್ದ ಇಬ್ಬರ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ಟಿಕೆಟ್ ನೀಡುವಂತೆ ಕೇಳಿದ್ದಾರೆ. ಟಿಕೆಟ್‌ನಲ್ಲಿದ್ದ ಹೆಸರಿಗೂ ಆರೋಪಿಗಳ ಹೆಸರಿಗೂ ವ್ಯತ್ಯಾಸವಿದ್ದ ಹಿನ್ನೆಲೆಯಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಬಳಿಕ ಉಡುಪಿ ನಿಲ್ದಾಣದಲ್ಲಿ ಇಬ್ಬರನ್ನು ಇಳಿಸಿ ತಹಶಿಲ್ದಾರ್, ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ.

      ಈ ಸಂದರ್ಭ ಆರೋಪಿಗಳ ಬ್ಯಾಗ್‌ನಲ್ಲಿ ಒಂದೂವರೆ ಕೋಟಿಗೂ ಅಧಿಕ ನಗದು ಪತ್ತೆಯಾಗಿದೆ. ಇದೀಗ ಆರೋಪಿಗಳ ವಿಚಾರಣೆ ಮುಂದುವರಿದಿದ್ದು, ಐಟಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಿದ್ದರೆ ಮಾತ್ರ ನಾವು ವಶಕ್ಕೆ ಪಡೆಯುತ್ತೇವೆ ಎಂದು ಚುನಾವಣಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap