ಸಂತ್ರಸ್ತರ ನೆರವಿಗೆ ಮುಂದಾಗಿ; ಬಿಎಸ್‍ವೈ

ಕುಶಾಲನಗರ:

ಮಂದಗತಿಯಲ್ಲಿ ಸಾಗದೆ ಕೂಡಲೇ ಸಂತ್ರಸ್ತರ ನೆರವಿಗೆ ಮುಂದಾಗುವಂತೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕುಶಾಲನಗರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗಂಜಿ ಕೇಂದ್ರಗಳಲ್ಲಿರುವ ಸಂತ್ರಸ್ತರ ಮನೆಗಳಲ್ಲಿ ಕಳ್ಳತನದ ಬಗ್ಗೆ ಮಾಹಿತಿ ಇದ್ದು, ಕೂಡಲೇ ಅಂತಹ ಮನೆಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಸಂತ್ರಸ್ತರಿಗೆ ಸಮರ್ಪಕವಾಗಿ ಆಹಾರ ಪೂರೈಕೆಯಾಗುತ್ತಿಲ್ಲ ಎಂದು ಕೇಳಿ ಬರುತ್ತಿದ್ದು, ತಕ್ಷಣ ಅದರ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮಳೆ ನಿಂತ ಮೇಲೆ ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ಮುಂದಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Recent Articles

spot_img

Related Stories

Share via
Copy link
Powered by Social Snap