ಸರ್ಕಾರ ಹೆಚ್ಚು ದಿನ ಉಳಿಯಲ್ಲ..!

ಮುಧೋಳ: 

     ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸರ್ಕಾರವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. 

      ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ಈ ಮಾತನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಲಮನ್ನಾ ಮಾಡುವುದಾಗಿ ಹೇಳಿರುವುದು ಸರಿಯಷ್ಟೆ, ಆದರೆ, ಅದರ ಬಗ್ಗೆ ಸ್ಪಷ್ಠತೆ ಇಲ್ಲದಂತಾಗಿದೆ, ಹೀಗಿರುವಾಗ ಸರ್ಕಾರ ಇದ್ದರೂ ಇಲ್ಲದಂತಾಗಿದೆ.

      ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ದಿ ಕಾರ್ಯ ನಡೆಯುತ್ತಿಲ್ಲ. ಸಹಕಾರಿ ಬ್ಯಾಂಕ್‌ಗಳು ದಿವಾಳಿ ಆಗುತ್ತಿವೆ. ನೂರು ದಿನದಲ್ಲಿ ಸಿಎಂ ಉತ್ತರ ಕರ್ನಾಟಕದಲ್ಲಿ ಒಂದು ದಿನವೂ ಪ್ರವಾಸ ಮಾಡಿಲ್ಲ. ರಾಜ್ಯದ 13 ಜಿಲ್ಲೆಗಳಲ್ಲಿ ಭೀಕರ ಬರ ಇದ್ದರೂ ಬಂದಿಲ್ಲ.ಇಂತಹ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.

      ಪ್ರಮುಖ ನಾಯಕರ ಫೋನ್ ಕದ್ದಾಲಿಕೆ ಕೂಡಾ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಎಲ್ಲೇ ಸ್ಪರ್ಧಿಸಿದ್ದರೂ ಕೂಡಾ ಏನೂ ಆಗಲ್ಲ ಎಂದು ಜರಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap