ಸಾಹಸ ಸಿಂಹ ಡಾ.ವಿಷ್ಣು ಜನ್ಮ ದಿನಾಚರಣೆ

ದಾವಣಗೆರೆ:

     ಇಲ್ಲಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಸಮೀಪದ ಇಂದಿರಾ ಕ್ಯಾಂಟಿನ್ ಬಳಿಯಲ್ಲಿ ಮಂಗಳವಾರ ಜೈ ಕರುನಾಡ ವೇದಿಕೆ ವತಿಯಿಂದ ಸಾಹಸ ಸಿಂಹ ಡಾ.ವಿಷ್ಣುವರ್ಧನ ಅವರ 68ನೇ ಜನ್ಮ ದಿನವನ್ನು ಆಚರಿಸಲಾಯಿತು.

      ಸಾಹಸ ಸಿಂಹ ಡಾ.ವಿಷ್ಣುವರ್ಧನ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಗೋವಿಂದರಾಜ್, ಜೈ ಕರುನಾಡ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಮಂಜುನಾಥ ಗೌಡ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ಪರಶುರಾಮ್ ನಂದಿಗಾವ್ ಸೇರಿದಂತೆ ಮತ್ತಿತರರು ಕೆಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಜೈ ಕರುನಾಡ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಮಂಜುನಾಥ ಗೌಡ, ಡಾ.ವಿಷ್ಣುವರ್ಧನ ಅವರ ಹಲವಾರು ಚಿತ್ರಗಳು ಜನರ ಮನದಲ್ಲಿ ಇನ್ನೂ ಹಚ್ಚ ಹಸಿರಾಗಿವೆ. ಅವರ ಅಭಿಯನ ಅಮೋಘವಾಗಿದೆ. ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ಹಿಂಭಾಗದಲ್ಲಿರುವ ವೃತ್ತಕ್ಕೆ ಸಾಹಸ ಸಿಂಹ ವಿಷ್ಣುವರ್ಧನ ಅವರ ಹೆಸರು ಇಡಬೇಕು ಎಂಬುದು ನಮ್ಮ ಮನವಿಯಾಗಿದೆ. ಈ ಬಗ್ಗೆ ಮಹಾನಗರ ಪಾಲಿಕೆಯ ಆಯುಕ್ತರಿಗೂ ಮನವಿಯನ್ನು ಅರ್ಪಿಸಲಾಗುತ್ತದೆ ಎಂದು ಹೇಳಿದರು.

      ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಾಣ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಕೂಡಲೇ ಅವರ ಸ್ಮಾರಕ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

        ಕಾರ್ಯಕ್ರಮದಲ್ಲಿ ವೇದಿಕೆ ಮುಖಂಡರಾದ ಟಿ.ಪರಶುರಾಮಪ್ಪ, ಟಿ.ಮಂಜುನಾಥ, ಎ.ರಾಘವೇಂದ್ರ ಶೆಟ್ಟಿ, ಎಸ್.ಅಣ್ಣಪ್ಪ, ಹೆಚ್.ನಾಗರಾಜ್, ರಹಮತ್‍ಉಲ್ಲಾ, ನಜೀರ್, ಪಂಚಾಕ್ಷರಿ ಗವಿಮಠ ಸೇರಿದಂತೆ ಮತ್ತಿತರರು ಹಾಜರಿದ್ದರು.
           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap