ಸಿ.ಎಂ.ವೈಮಾನಿಕ ಸಮೀಕ್ಷೆ ಕ್ಯಾನ್ಸಲ್ : ರಸ್ತೆ ಮೂಲಕ ಪ್ರವಾಹ ಸಮೀಕ್ಷೆಗೆ ಮುಂದಾದ ಹೆಚ್.ಡಿ.ಕೆ

ಬೆಂಗಳೂರು:   

       ಕೊಡಗಿನಲ್ಲಿ ಪ್ರವಾಹ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಈ ಹಿನ್ನೆಲೆ ವೈಮಾನಿಕ ಸಮೀಕ್ಷೆಯನ್ನು ರದ್ದುಪಡಿಸಿ ಖುದ್ದಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ರಸ್ತೆಯ ಮೂಲಕವೇ ತೆರಳಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

      ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಕುಮಾರಸ್ವಾಮಿ ಅವರು ಹೆಲಿಕಾಪ್ಟರ್​ನಲ್ಲಿ ಪಿರಿಯಾಪಟ್ಟಣಕ್ಕೆ ತೆರಳಲಿದ್ದು, ನಂತರ ಮಡಿಕೇರಿಗೆ ರಸ್ತೆ ಮಾರ್ಗವಾಗಿ ತೆರಳಲಿದ್ದಾರೆ. ಮಡಿಕೇರಿಯಲ್ಲಿ ಪ್ರವಾಹಕ್ಕೊಳಗಾಗಿರುವ ಪ್ರದೇಶಗಳ ಅವಲೋಕನ ಮಾಡಲಿದ್ದಾರೆ. ತುರ್ತು ಪರಿಸ್ಥಿತಿಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

      ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆಗೆ ಮುಂದಾಗಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈಮಾನಿಕ ಸಮೀಕ್ಷೆಯನ್ನು ರದ್ದುಗೊಳಿಸಿದ್ದಾರೆ.

      ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ ಕಾರಣ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಯ ವೈಮಾನಿಕ ಸಮೀಕ್ಷೆಯನ್ನು ರದ್ದುಗೊಳಿಸಿದ್ದಾರೆ.

      ಆಗಸ್ಟ್ 19, ಭಾನುವಾರ ಪ್ರವಾಹ ಪೀಡಿತ ನಂಜನಗೂಡು ಮತ್ತು ಕಬಿನಿಗೆ ಸಿಎಂ ಭೇಟಿ ನೀಡಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap