ಮೈಸೂರು:
ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಗ್ರಾವೆಲ್ ಫೆಸ್ಟ್ ಆಟೋಕ್ರಾಸ್ ರೇಸ್ ಸ್ಪರ್ಧೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪಾಲ್ಗೊಳ್ಳುತ್ತಿಲ್ಲ ಎಂದು ಆಟೋಮೋಟಿವ್ ಸ್ಪೋರ್ಟ್ಸ್ ಕ್ಲಬ್ ಆಫ್ ಮೈಸೂರು ಸ್ಪಷ್ಟಪಡಿಸಿದೆ.
ನಟ ದರ್ಶನ್ ಹೋಲ್ಕ್ಸ್ ವ್ಯಾಗನ್ ಕಾರಿನಲ್ಲಿ ಸುಮಾರು 10 ದಿನಗಳ ಕಾಲ ಪ್ರಾಕ್ಟಿಸ್ ಮಾಡಿದ್ದರು. ಕೆಲದಿನಗಳ ಹಿಂದೆ ಅಪಘಾತವಾದ್ದರಿಂದ ಶಸ್ತ್ರ ಚಿಕಿತ್ಸೆ ವೇಳೆ ದರ್ಶನ್ ಬಲಗೈಗೆ ಪ್ಲೇಟ್ ಹಾಕಲಾಗಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದರ್ಶನ್ ರೇಸ್ ನಲ್ಲಿ ಭಾಗವಹಿಸುತ್ತಿಲ್ಲ. ಸದ್ಯ ಕಾರ್ ರೇಸ್ ಸ್ಪರ್ಧೆಗಳಿಗೆ ಪ್ರೋತ್ಸಾಹಿಸಲು ನಟ ದರ್ಶನ್ ಬರಲಿದ್ದಾರೆ ಎಂದು ಕ್ಲಬ್ ತಿಳಿಸಿದೆ. ಕಾರು ಅಪಘಾತದಿಂದ ದರ್ಶನ್ ಕಂಡಿದ್ದ ಬಹುದಿನದ ಆಸೆಯೊಂದು ನುಚ್ಚು ನೂರಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ