`ಪ್ರಭುತ್ವ’ ನಿರ್ಮಾಣ ಮಾಡುತ್ತಿರುವ ರವಿರಾಜ್

       ರವಿರಾಜ್.ಎಸ್.ಕುಮಾರ್ ಅವರು ನಿರ್ಮಿಸುತ್ತಿರುವ `ಪ್ರಭುತ್ವ’ ಚಿತ್ರಕ್ಕೆ ಆರ್.ಎಸ್.ಗೌಡ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಕೋರ್ಟ್ ಸೆಟ್‍ನಲ್ಲಿ ಚಿತ್ರೀಕರಣ ನಡೆಯುತ್ತಿದೆ.

      ಶಶಿಕುಮಾರ್, ಪಾವನ, ಅಂಬಿಕ, ಅವಿನಾಶ್, ಆದಿ ಲೋಕೇಶ್, ಪೂಜಾಲೋಕೇಶ್, ಶ್ರೀಧರ್, ಚೇತನ್, ಅರವಿಂದ್, ನಂದೀಶ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಮೇಘಡಹಳ್ಳಿ ಶಿವಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಆರ್.ರಂಗಾನಾಥ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ವಿನೋದ್, ಮಾಸ್ ಮಾದ, ವಿಕ್ರಂ ಸಾಹಸ ನಿರ್ದೇಶನ, ಮೋಹನ್, ಕಲೈ, ಮುರಳಿ ನೃತ್ಯ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ನರಸಿಂಹ ಜಾಲಹಳ್ಳಿ, ಸುಧೀರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಹಾಡುಗಳನ್ನು ಕವಿರಾಜ್, ಡಾ||ವಿ.ನಾಗೇಂದ್ರಪ್ರಸಾದ್, ಚೇತನ್‍ಕುಮಾರ್(ಭರ್ಜರಿ), ಅಲೆಮಾರಿ ಸಂತು ರಚಿಸಿದ್ದಾರೆ.

      ಸಂಭಾಷಣೆಯನ್ನು ವಿನಯ್ ಬರೆದಿದ್ದಾರೆ. ಚೇತನ್ ಚಂದ್ರ ನಾಯಕರಾಗಿ ನಟಿಸುರುವ ಈ ಚಿತ್ರದ ನಾಯಕಿ ಪಾವನ. ನಾಜರ್, ಶಶಿಕುಮಾರ್, ಅಂಬಿಕ, ಸಾಧುಕೋಕಿಲ, ಮುನಿ, ಪೆಟ್ರೋಲ್ ಪ್ರಸನ್ನ, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಗಿರಿ, ಹರೀಶ್ ರೈ, ಪೂಜಾಲೋಕೇಶ್, ಅವಿನಾಶ್, ವೀಣಾಸುಂದರ್, ವಿಜಯ್ ಚೆಂಡೂರ್, ಅಮಿತಾ ಕುಲಾಳ್, ಅನಿತಾ ಭಟ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

                    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap