ಶಾಸಕರನ್ನ ಉಳಿಸಿಕೊಳ್ಳಲು ಮಹಾಪ್ಲಾನ್​ : ರಾತೋರಾತ್ರಿ ಬೆಂಗಳೂರಿಗೆ ದೌಡಾಯಿಸಿದ ಕೆ.ಸಿ. ವೇಣುಗೋಪಾಲ್

  ಕುಮಾರಕೃಪಾ ಗೆಸ್ಟ್ ಹೌಸ್​​ನಲ್ಲಿ ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲುವು ನಾಯಕರ ಜೊತೆಗೆ ಚರ್ಚೆ ಮುಂದುವರೆಸಿದ್ದಾರೆ.  

  ಕಾಂಗ್ರೆಸ್​ನ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದೆಲ್ಲ ವದಂತಿ ಎಂದು ಹೇಳಿರುವ ಕಾಂಗ್ರೆಸ್​ ನಾಯಕರು ಬಿಜೆಪಿ ಹಗಲುಗನಸು ಕಾಣುತ್ತಿದೆ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ಕಾಂಗ್ರೆಸ್​ನ ಕೆಲವು ಶಾಸಕರು ಮುಂಬೈ ಮತ್ತು ನವದೆಹಲಿಯಲ್ಲಿದ್ದಾರೆ. ಅವರನ್ನು ನೇರವಾಗಿ ರಾಜಭವನಕ್ಕೆ ಕರೆದುಕೊಂಡು ಬರಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.  ಆ ಮೂಲಕ ಈ ಮೊದಲೇ ಹೇಳಿದಂತೆ ಸಂಕ್ರಾಂತಿಯ ನಂತರ ತಮ್ಮ ಸರ್ಕಾರ ರಚನೆ ಮಾಡಲು ತಂತ್ರ ರೂಪಿಸಿದೆ ಎಂಬ ಸುದ್ದಿಗಳು ಹರಡಿದ್ದವು.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap