ಇನ್ಮುಂದೆ 5-8ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ-ಕೇಂದ್ರ ಸರ್ಕಾರ

ನವದೆಹಲಿ :

   ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಮಕ್ಕಳನ್ನು ಫೇಲ್ ಮಾಡಬಾರದು ಎಂಬ 2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ಹೊಸ ತಿದ್ದುಪಡಿಯನ್ನು ಮಾಡಿದೆ.

   ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. ಹೀಗಾಗಿ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಹೊಸ ತಿದ್ದು ಪಡಿಗೆ ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.

   2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ. ಹೊಸ ತಿದ್ದುಪಡಿ ಅನ್ವಯ ಇನ್ಮುಂದೆ 5 ಮತ್ತು 8ನೇ ತರಗತಿಯ ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ ಹೊಂದುತ್ತಾರೆ.

ಒಂದು ವೇಳೆ 5-8ನೇ ತರಗತಿಯ ಪರೀಕ್ಷೆಯಲ್ಲಿ ಫೇಲ್ ಆದರೆ ಮುಂದಿನ ಎರಡು ತಿಂಗಳಲ್ಲಿ ಮರು ಪರೀಕ್ಷೆಯನ್ನ ಶಾಲೆಯವರು ನೀಡಬೇಕು ಎಂದು ತಿಳಿಸಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap