ಪೂರ್ವ ದೆಹಲಿಯಿಂದ ಗೌತಮ್ ಗಂಭೀರ್ ಕಣಕ್ಕೆ!!!

ನವದೆಹಲಿ:

      ಮಾಜಿ ಕ್ರೆಕೆಟಿಗ ಗೌತಮ್‌ ಗಂಭೀರ್‌ ಅವರನ್ನು ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿಯು ಸೋಮವಾರ ರಾತ್ರಿ ಘೋಷಿಸಿದೆ. 

      ದೆಹಲಿಯ 7 ಲೋಕಸಭೆ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತು.  ಮಾಜಿ ಕ್ರಿಕೆಟಿಕ ಗೌತಮ್‌ ಗಂಭೀರ್‌ ಅವರು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. 

     ಇಂದು (ಮಂಗಳವಾರ) ಭರ್ಜರಿ ರೋಡ್​ ಶೋ ನಡೆಸಿದ ಗೌತಮ್​ ಗಂಭೀರ್​ ನಾಮಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ನಾನು ರಾಷ್ಟ್ರಕ್ಕಾಗಿ ಏನಾದರೂ ಸೇವೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ರಂಗ ಪ್ರವೇಶಿಸುತ್ತಿದ್ದೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಬದ್ಧವಾಗಿದ್ದೇನೆ ಎಂದರು.

     ಕೆಲದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೌತಮ್​ ಗಂಭೀರ್​ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿತ್ತು. ಆದರೆ, ಯಾವ ಕ್ಷೇತ್ರ ಎಂಬುದು ಸ್ಪಷ್ಟವಾಗಿರಲಿಲ್ಲ. ಈಗ ಈ ಕುತೂಹಲಕ್ಕೆ ತೆರಬಿದ್ದಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap