ದೆಹಲಿ:
“ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಈ ದೇಶಕ್ಕೊಂದು ಪ್ರಜಾಪ್ರಭುತ್ವದ ಭದ್ರ ತಳಪಾಯ ಹಾಕಿದ್ದರಿಂದಲೇ ಒಬ್ಬ ಚಾಯ್ ವಾಲಾ ನರೇಂದ್ರ ಮೋದಿ ಸಹ ಇಂದು ಪ್ರಧಾನಿಯಾಗುವುದಕ್ಕೆ ಸಾಧ್ಯವಾಗಿದ್ದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ನೆಹರು ಜನ್ಮದಿನದಂದು ದೆಹಲಿಯಲ್ಲಿ ಆಯೋಜಿಸಿದ್ದ ತಮ್ಮ ‘ನೆಹರೂ, ದಿ ಇನ್ವೆಂಷನ್ ಆಫ್ ಇಂಡಿಯಾ’ ಪುಸ್ತಕ ಮರುಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ತರೂರ್, ಜವಾಹರಲಾಲ್ ನೆಹರು ಅವರ ಜನ್ಮದಿನ(ನವೆಂಬರ್ 14)ದ ಹಿನ್ನೆಲೆಯಲ್ಲಿ ಅವರ ಗುಣಗಾನ ಮಾಡಿದರು.
“ಇಂದು ನಾವು ಒಬ್ಬ ಚಾಯ್ ವಾಲಾನನ್ನು ಪ್ರಧಾನಿಯಾಗಿ ಪಡೆದಿದ್ದರೆ ಅದಕ್ಕೆ ಕಾರಣ ನೆಹರುಜೀ! ಭಾರತದ ಸಾಂಸ್ಥಿಕ ವ್ಯವಸ್ಥೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ನಿರ್ಮಿಸಿ, ಒಬ್ಬ ಸಾಮಾನ್ಯ ವ್ಯಕ್ತಿ ಸಹ ಪ್ರಧಾನಿಯಾಗುವಂತೆ ಮಾಡಿದವರು ನೆಹರು” ಎಂದು ತರೂರ್ ಅಭಿಪ್ರಾಯ ಪಟ್ಟರು.
“ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ನೆಹರು ಅವರ ವ್ಯಕ್ತಿತ್ವವನ್ನು ಕೀಳಾಗಿ ಚಿತ್ರಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿರುವುದು ವಿಷಾದನೀಯ” ಎಂದು ತರೂರ್ ಬೇಸರ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ