ಕೇರಳ:
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಅವರು ಕೇರಳದಿಂದ ಸ್ಪರ್ಧೆ ಮಾಡುವ ಕುರಿತು ಮುನ್ಸೂಚನೆ ದೊರೆತಿದೆ.
ಹೌದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದಕ್ಷಿಣ ಭಾರತದಿಂದಲೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ವಯನಾಡ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇರಳ ಕಾಂಗ್ರೆಸ್ ಮುಖ್ಯಸ್ಥ ಮುಲ್ಲಪಳ್ಳಿ ರಾಮಚಂದ್ರನ್ ಶನಿವಾರ ತಿಳಿಸಿದ್ದಾರೆ.
ವಯನಾಡ್ನಿಂದ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ. ಸಿದ್ದಿಕಿ ಅವರ ಹೆಸರನ್ನು ಪ್ರಕಟಿಸಲಾಗಿತ್ತು. ಈಗ ಸಿದ್ದಿಕಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ರಾಹುಲ್ ಗಾಂಧಿಗಾಗಿ ತಮ್ಮ ಸ್ಪರ್ಧೆಯನ್ನು ತ್ಯಾಗ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸದ್ಯ 20 ಕ್ಷೇತ್ರಗಳಿರುವ ಕೇರಳದಲ್ಲಿ ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 14 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆದರೆ, ವಯನಾಡು ಮತ್ತು ವಡಕಾರ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ