ಚೌಕಿದಾರ್ ಮೋದಿಗೆ ತಿರುಗೇಟು ನೀಡಿದ ಖರ್ಗೆ …!!!

ಕಲಬುರಗಿ:

         ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ಮತ್ತು ಕಮಲದ ನಾಯಕರ ನಡುವಿನ ಮಾತಿನ ಸಮರ ಜೋರಾಗಿದೆ , ಪ್ರಧಾನಿ ನರೇಂದ್ರ ಮೋದಿ ಅವರ ನಾನು ದೇಶದ ಚೌಕಿದಾರ ಅಷ್ಟೆ ಎಂಬಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್ ನೀಡಿದ್ದಾರೆ.

         ‘ಚೌಕಿದಾರ್’ ಹಣೆಬರ ಏನು ಎಂದು ಜನರಿಗೆ ಗೊತ್ತಿದೆ. ಮೊದಲು ನಾನು ಪ್ರಧಾನಮಂತ್ರಿ ಅಲ್ಲ ಪ್ರಧಾನ ಸೇವಕ್ ಅಂತಿದ್ದವರು, ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಬಿಜೆಪಿ ಸರ್ಕಾರ ಚೌಕಿದಾರ ದೇಶದಲ್ಲಿ ಆಗುವ ದೊಡ್ಡ ಹಗರಣಗಳಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿದರು.

          ದೇಶದಲ್ಲಿನ ಸಂಪತ್ತು ಮತ್ತು ಸಂಪನ್ಮೂಲ ರಕ್ಷಣೆ ಮಾಡುವುದು ಬಿಟ್ಟು ಬೇರೆಯವರಿಗೆ ದುಡ್ಡು ಮಾಡಿ ಕೊಡೋದು ಸರಿಯೇ??. ರಫೇಲ್ ಡೀಲ್, ದೊಡ್ಡ ದೊಡ್ಡ ಶ್ರೀಮಂತರು, ಕಂಪನಿಗಳ ಸಾಲ ಮನ್ನಾ ಇನ್ನೂ ಮುಂತಾದ ಹಗರಣಗಳನ್ನು ಮಾಡಿದ್ದಾರೆ. ಸುಮಾರು ಮೂರು ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ಈ ದುಡ್ಡು ಜನರದ್ದು, ರೈತರ ಸಾಲಮನ್ನಾ ಮಾಡಿ ಅಂದರೆ ಆಗಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳುತ್ತಿದ್ದಾರೆ. ಈಗ ಚುನಾವಣಾ ಸಂದರ್ಭದಲ್ಲಿ ಎರಡೆರಡು ಸಾವಿರ ರೂ. ಮೊದಲ ಕಂತು ಬಿಡುಗಡೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

            ರೈತನಿಗೆ ದಿನಕ್ಕೆ 16.40 ರೂ. ಕೊಟ್ಟು ದೇಶದ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಮೋದಿ ದೇಶದ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಚೌಕಿದಾರ ಸಾವಿರಾರು ಕೋಟಿ ರೂ. ಬೇರೆಯವರಿಗೆ ಲಾಭ ಮಾಡಿ ಕೊಡುತ್ತಿದ್ದಾರೆ. ಜನರ ದುಡ್ಡು ಕದ್ದು ಬೇರೆಯವರಿಗೆ ಹಂಚುತ್ತಿದ್ದಾರೆ. ಹೀಗಾಗಿ ‘ಚೌಕಿದಾರ್ ಚೋರ್ ಹೈ’ ಅಂತಾ ಹೇಳಿದ್ದೇವೆ. ಈಗ ತಾವೇ ಮರುನಾಮಕರಣ ಮಾಡಿಕೊಂಡಿದ್ದಾರೆ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap