ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಕೃಷಿ ಮೇಳ

ಬೆಂಗಳೂರು

        ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಕೃಷಿ ಮೇಳ ಇದೇ 18 ರಿಂದ 20ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ.ಸಾವಯವ ಉತ್ಪನ್ನ ಬೆಳೆಯುವ ರೈತರು ಮತ್ತು ಖರೀದಿದಾರರು ಭಾಗವಹಿಸಿ ನೇರವಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಈ ಮೇಳದಲ್ಲಿ 200 ಪ್ರದರ್ಶಕರು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಸಾವಯವ ಕೃಷಿಕರು, ಖರೀದಿದಾರರು ಬೆಳೆಗಾರರು, ಮಾರಾಟಗಾರರು ಮತ್ತು ಅನೇಕ ವಿದೇಶಿ ಕಂಪನಿಗಳು ಈ ಉತ್ಸವದಲ್ಲಿ ಭಾಗಿಯಾಗಲಿದೆ. ಮುಂದಿನ ತಲೆಮಾರಿಗೆ ಸ್ಮಾರ್ಟ್ ಫುಡ್ ಮೂಲವಾಗಿ ಕರ್ನಾಟಕ ಹೊರಹೊಮ್ಮಲಿದೆ. ಹೊರ ರಾಜ್ಯಗಳು ಈ ಮೇಳದಲ್ಲಿ ಮಳಿಗೆಗಳನ್ನು ತೆರೆಯಲಿವೆ.ಕರ್ನಾಟಕ ಸಿರಿಧಾನ್ಯ, ಸಾವಯವ ಕೃಷಿಯನ್ನು ಉತ್ತೇಜಿಸಿದ್ದು, ಬೆಂಗಳೂರು ದೇಶದ ಪ್ರಮುಖ ಸಿರಿಧಾನ್ಯ ಉತ್ಪನ್ನಗಳ ಮಾರುಕಟ್ಟೆಯಾಗಿ ರೂಪುಗೊಳ್ಳುತ್ತಿದೆ. ಅನೇಕ ವಿದೇಶಿ ಕಂಪನಿಗಳು ಈ ಮೇಳದಲ್ಲಿ ಭಾಗಿಯಾಗಲಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap