ಆಕಸ್ಮಿಕ ಬೆಂಕಿಗೆ ದಾಳಿಂಬೆ ತೋಟ ನಾಶ

ಶಿರಾ

       ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ದಾಳಿಂಬೆ ತೋಟ ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿರುವ ಘಟನೆ ಶಿರಾ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

       ನಾದೂರು ಸರ್ವೇ ನಂ-495 ರಲ್ಲಿ 4 ಎಕರೆ ಜಮೀನು ಹೊಂದಿದ್ದ ರೈತ ಸಿದ್ದಲಿಂಗಪ್ಪ 4 ಎಕರೆ ಪ್ರದೇಶದಲ್ಲಿ 2 ಸಾವಿರ ದಾಳಿಂಬೆ ಗಿಡ ಪೋಷಣೆ ಮಾಡಿ, ಒಂದೆರಡು ಬಾರಿ ಫಸಲನ್ನೂ ಪಡೆದಿದ್ದರು ಎನ್ನಲಾಗಿದೆ. ಕೊಳವೆ ಬಾವಿಯಲ್ಲಿ ನೀರು ಕಡಿಮೆಯಾದ ಕಾರಣ ಬೆಳೆಗೆ ನೀರು ಹಾಯಿಸಲು ವಿಳಂಬವಾಗಿತ್ತು. ಭಾನುವಾರ ಬೆಳಗ್ಗೆ ಏಕಾಎಕಿ ದಾಳಿಂಬೆ ತೋಟಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಿಡಗಳು, ಹನಿ ನೀರಾವರಿ ಪೈಪ್, ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ರೈತ ಸಿದ್ದಲಿಂಗಪ್ಪ ಆರ್ಥಿಕ ಸಂಕಷ್ಟ ಎದುರಿಸುವಂತೆ ಮಾಡಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap