ಬೆಂಗಳೂರು
ರಸ್ತೆಯಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಬಿಟ್ಟು ನಿಲ್ದಾಣದಲ್ಲಿ ಆಟೋವನ್ನು ನಿಲ್ಲಿಸು ಎಂದು ಹೇಳಿದ್ದ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ.
ದೇವಸಂದ್ರದ ನಿವಾಸಿ ಜೆ.ಸಿ.ಲೇಔಟ್ ನಿವಾಸಿ ಮಹಮ್ಮದ್ ಖಯೂಂ (28) ಬಂಧಿತ ಆರೋಪಿಯಾಗಿದ್ದಾನೆ ,ದೇವಸಂದ್ರ ಜೆಂಕ್ಷನ್ ಬಳಿ ಸುಗಮ ಸಂಚಾರ ನಿಯಂತ್ರಣಕ್ಕಾಗಿ ರಾಜಸಾಬ್ ಧೋನಿ ಅವರನ್ನು ನವೆಂಬರ್ 7ರಂದು ನಿಯೋಜನೆ ಮಾಡಲಾಗಿತ್ತು.ಈ ವೇಳೆ ಅಲ್ಲಿಗೆ ಬಂದಿದ್ದ ಆಟೋ ಚಾಲಕ ಮಹಮ್ಮದ್ ಆಟೋವನ್ನು ರಸ್ತೆ ಬದಿಗೆ ನಿಲ್ಲಿಸಿದ್ದ. ಇದನ್ನು ನೋಡಿದ ರಾಜಸಾಬ್ ಧೋನಿ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ.ಆಟೋವನ್ನು ನಿಲ್ದಾಣದಲ್ಲಿ ನಿಲ್ಲಿಸಿ ಎಂದು ತಿಳಿಸಿದ್ದಾರೆ.
ಇದರಿಂದ ಕೋಪಗೊಂಡ ಮಹಮ್ಮದ್ ಆಟೋದಿಂದ ಇಳಿದು ರಾಜಸಾಬ್ ಧೋನಿ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದನು.ಈ ಸಂಬಂಧ ರಾಜಸಾಬ್ ಧೋನಿ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಕೆ.ಆರ್.ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ