ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ದಂಪತಿಗೆ ನೆರವಾದ ಬಟ್ಟೆ ವ್ಯಾಪಾರಿ

ಬೆಂಗಳೂರು

      ಮುಷ್ಕರದಿಂದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪರದಾಡುತ್ತಿದ್ದ ದಂಪತಿಗೆ ನಗರದ ಬಟ್ಟೆ ವ್ಯಾಪಾರಿಯೊಬ್ಬರು ಸಹಾಯಕ್ಕೆ ಮುಂದಾಗಿ ಮಾನವೀಯತೆ ತೋರಿಸಿದ್ದಾರೆ.

      ಒಂದು ತಿಂಗಳ ಕಂದಮ್ಮ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿತ್ತು. ಇಂದೇ ನಾರಾಯಣ ನೇತ್ರಾಲಯಕ್ಕೆ ಕರೆದುಕೊಂಡು ಹೋಗಬೇಕಾಗಿತ್ತು. ಆದ್ದರಿಂದ ಬಿಜಾಪುರದಿಂದ ಬಂದಿದ್ದ ದಂಪತಿ ಮಗುವಿನ ಜೊತೆ ಬಸ್ಸಿಗಾಗಿ ಕಾದು ಕುಳಿತಿದ್ದರು.

      ಸುಮಾರು ಮೂರು ತಾಸು ಕಾದು ಕುಳಿತರೂ ಬಸ್ ಬಂದಿರಲಿಲ್ಲ.ಇತ್ತ ಆಟೋಗೆ ಹೋಗೋದಕ್ಕೂ ಅವರ ಬಳಿ ಅಷ್ಟೋಂದು ಹಣವೂ ಇರಲಿಲ್ಲ. ಕೊನೆಗೆ ಸಭಾಪತಿ ಅವರು ಪುಟಾಣಿಯನ್ನು ಉಚಿತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದಿದ್ದಾರೆ.

       ಬಟ್ಟೆ ವ್ಯಾಪಾರಿ ಸಭಾಪತಿ ಪ್ರತಿ ವರ್ಷ ಬಂದ್ ಸಂದರ್ಭದಲ್ಲಿ ಗರ್ಭಿಣಿಯರಿಗೆ, ಆಸ್ಪತ್ರೆಗೆ ಹೋಗುವವರಿಗೆ ಮತ್ತು ತುರ್ತು ಸೇವೆ ಬೇಕಾದವರಿಗೆ ಉಚಿತವಾಗಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಈ ಬಾರಿಯೂ ಕೂಡ ಬಂದ್ ಸಮಯದಲ್ಲಿ ಬಿಜಾಪುರ ದಂಪತಿಯ ಮಗುವನ್ನು ಸ್ವತಃ ಸಭಾಪತಿ ಅವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.

      ಈ ವೇಳೆ ತಾಯಿ ಮಾತನಾಡಿ, ಮಗುವಿಗೆ ಕಣ್ಣಿನ ತೊಂದರೆ ಇದೆ. ಹೀಗಾಗಿ ನಾರಾಯಣ ಆಸ್ಪತ್ರೆಗೆ ತೋರಿಸಲು ಕರೆದುಕೊಂಡು ಬಂದಿದ್ದೇವೆ. ವೈದ್ಯರು ಚಿಕಿತ್ಸೆಗಾಗಿ ಇಂದೇ ಬರಬೇಕು ಎಂದು ಹೇಳಿದ್ದರು. ಆದ್ದರಿಂದ ಬೇಗ ತೋರಿಸಲು ಬಂದಿದ್ದೆವು. ಆದರೆ ಬಸ್ ಸಿಗಲಿಲ್ಲ. ಕೊನೆಗೆ ಇವರೇ ಆಸ್ಪತ್ರೆಗೆ ಬಿಟ್ಟಿದ್ದಾರೆ ಎಂದು ಸಂತಸದಿಂದ ಹೇಳಿದ್ದಾರೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap