ಬೆಂಗಳೂರು
ಕಾಡುಪ್ರಾಣಿಗಳಿಂದಾಗುವ ಬೆಳೆ ನಷ್ಟಕ್ಕೆ ವಿಮೆ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಆಯ್ದ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಈ ಮುನ್ನ ಸ್ಥಳೀಯ ಭೂಕುಸಿತ, ಪ್ರವಾಹ, ಬಿರುಗಾಳಿ ಮುಂತಾದವುಗಳಿಂದ ಉಂಟಾಗುವ ಬೆಳೆ ನಷ್ಟ, ಫಸಲ್ಬಿಮಾ ಯೋಜನೆಯಡಿ ಬರುತ್ತಿರಲಿಲ್ಲ. ಆದರೆ, ಈಗ ಇವುಗಳನ್ನು ವಿಮೆ ವ್ಯಾಪ್ತಿಗೆ ತರಲಾಗಿದೆ.
ಇದಲ್ಲದೇ ಕೆಲವು ತೋಟಗಾರಿಕೆ ಬೆಳೆಗಳನ್ನು ಪ್ರಾಯೋಗಿಕವಾಗಿ ಫಸಲ್ಬಿಮಾ ಯೋಜನೆ ವ್ಯಾಪ್ತಿಗೆ ತರಲಾಗುತ್ತಿದೆ. ಕೃಷಿ ವಲಯದ ಹಲವು ಭಾಗೀದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ ಕೃಷಿ ವಿಮೆ ಯೋಜನೆಗೆ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ರಾಧಮೋಹನ್ ಸಿಂಗ್ ವಿವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ