ರೈತರಿಂದ ದೆಹಲಿ ಚಲೋ

ತಿಪಟೂರು :

          ದೇಶದಲ್ಲಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಕೃಷಿಯನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಾ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಖಿಲ ಭಾರತ ರೈತ ಸಂಘರ್ಷ ವತಿಯಿಂದ ದೆಹಲಿ ಚಲೋ ಹಮ್ಮಿಕೊಳ್ಳಲಾಗಿದ್ದು ದಿನಾಂಕ:30-11-2018 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಷ್ಟ್ರದ ಎಲ್ಲಾ ಜಿಲ್ಲೆಗಳಿಂದ ಬಂದಂತಹ ರೈತರ ಸಮಾವೇಶವನ್ನು ಮಾqಲಾಗುವ್ಯದೆಂದು ಕರ್ನಾಟಕ ರಾಜ್ಯ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಕೆಂಕೆರೆ ಸತೀಶ್ ಆಗ್ರಹಿಸಿದರು,

            ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ರೈತರ ಆತ್ಮಹತ್ಯೆಯನ್ನು ತಡೆಗಟ್ಟಲು ಹಾಗೂ ಕೃಷಿಯನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಾ. ಸ್ವಾಮಿನಾಥನ್ ವರದಿ ಅನ್ವಯ ಉತ್ಪಾದನ ವೆಚ್ಚದ ಮೇಲೆ ಕನಿಷ್ಠ 50% (ಸಿ2+50) ಲಾಭವನ್ನು ಸೇರಿಸಿ ಬೆಂಬಲ ಬೆಲೆ ಖಾತ್ರಿಗೊಳಿಸುವ ಕಾನೂನು ಹಾಗೂ ಎಲ್ಲಾ ರೈತರಿಗೆ ಕೃಷಿ ಕೂಲಿ ಕಾರ್ಮಿಕರಿಗೆ ಅಗತ್ಯವಿರುವಷ್ಟು ಕಡಿಮೆ ಬಡ್ಡಿಯ ಬ್ಯಾಂಕ್ ಸಾಲ ನೀಡಿಕೆ ವಿಶೇಷ ಸಂದರ್ಭದಲ್ಲಿ ಸಾಲಮನ್ನವನ್ನು ಖಾತ್ರಿಗೊಳಿಸುವ ಋಣಮುಕ್ತ ಕಾಯಿದೆಗಳನ್ನು ಕೂಡಲೇ ಲೋಕಸಭೆಯಲ್ಲಿ ವಿಶೇಷ ಸಮಸ್ಯೆಗಳೆಂದು ಪರಿಗಣಿಸಿ ಅಧಿವೇಶನದಲ್ಲಿ ಅವಕಾಶ ಮಾಡಿಕೊಂಡು ಮೇಲ್ಕಂಡ ಎರಡು ವಿಷಯಗಳ ಬಗ್ಗೆ ಚರ್ಚೆ ಮಾಡಿ ಮಸೂದೆಯನ್ನು ಅಂಗೀಕರಿಸಬೇಕೆಂದು ಆಗ್ರಹಿಸಿದರು.

          ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘ ಅದ್ಯಕ್ಷರಾದ ದೇವರಾಜು ಮಾತನಾಡಿ ದೇಶದ 200ಕ್ಕೂ ಹೆಚ್ಚು ರೈತ ಮತ್ತು ಕೃಷಿ ಕಾರ್ಮಿಕ ಸಂಘಟನೆಗಳು ಸೇರಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಚಿಸಿಕೊಂಡು ರೈತಮುಕ್ತಿ ಮಹಾ ಪಾದಯಾತ್ರೆ ಮತ್ತು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನಿಂದ ನವೆಂಬರ್ 27ರಂದು ವಿಶೇಷ ರೈಲಿನಲ್ಲಿ ಪ್ರಯಾಣಿಸಲು ತೀರ್ಮಾನಿಸಿದ್ದು ಅದರಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ರೈತರು ಮುಂಗಡವಾಗಿ ನೊಂದಾಯಿಸಿಕೊಂಡು ಈ ಪ್ರಯಾಣಕ್ಕೆ ಅಣಿಯಾಗಬೇಕೆಂದು ರೈತ ಸಂಘವು ಮನವಿ ಮಾಡುತ್ತದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap