ಬೆಂಗಳೂರು
ಎಟಿಎಂ ಕೇಂದ್ರಕ್ಕೆ ನುಗ್ಗಿ ಹಣ ದೋಚಲು ದುಷ್ಕರ್ಮಿಗಳು ವಿಫಲ ಯತ್ನ ನಡೆಸಿರುವ ದುರ್ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್ಡಿಐ ವೃತ್ತದ ಬಳಿ ಗುರುವಾರ ಮುಂಜಾನೆ ನಡೆದಿದೆ.
ಎಫ್ಡಿಐ ವೃತ್ತದ ಭಾರತ್ ಪೆಟ್ರೋಲ್ ಬಂಕ್ ಬಳಿ ಇರುವ ಹೆಚ್ಡಿಎಫ್ಸಿ ಬ್ಯಾಂಕ್ನ ಎಟಿಎಂ ಕೇಂದ್ರಕ್ಕೆ ಮುಂಜಾನೆ 2ರ ವೇಳೆ ನುಗ್ಗಿರುವ ದುಷ್ಕರ್ಮಿಗಳು ಯಂತ್ರದ ಕೀ ಬೋರ್ಡ್ ಒಡೆದು ಹಾನಿಗೊಳಿಸಿ, ಹಣ ದೋಚಲು ಯತ್ನಿಸಿದ್ದಾರೆ.
ಈ ವೇಳೆ ಗಸ್ತು ತಿರುಗಲು ಬರುತ್ತಿದ್ದ ಹೊಯ್ಸಳ ವಾಹನದ ಶಬ್ಧ ಕೇಳಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಅನುಮಾನದ ಮೇಲೆ ಓರ್ವನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ. ಆತ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿರುವ ನಂದಿನಿ ಲೇಔಟ್ ಪೊಲೀಸರು, ಎಟಿಎಂ ಕೇಂದ್ರದ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸಿ, ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ