ಬೆಂಕಿ ತಗುಲಿ ಸುಟ್ಟುಕರಕಲಾದ ಪೆಟ್ಟಿಗೆ ಅಂಗಡಿ

ತುರುವೇಕೆರೆ:

        ಬೆಂಕಿ ತಗುಲಿ ಪೆಟ್ಟಿಗೆ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಪಟ್ಟಣದ ಸಮೀಪದ ಮುನಿಯೂರು ಕ್ರಾಸ್‍ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

         ಸುಮಾರು ದಿನಗಳಿಂದ ಚಿರಂಜೀವಿ ಎಂಬುವನು ಮುನಿಯೂರು ಕ್ರಾಸ್‍ನಲ್ಲಿ ಪೆಟ್ಟಿಗೆ ಅಂಗಡಿಯಲ್ಲಿ ಪಂಚರ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಮಂಗಳವಾರ ರಾತ್ರಿ ಸಮಯದಲ್ಲಿ ಪೆಟ್ಟಿಗೆ ಅಂಗಡಿ ಬೆಂಕಿಯಿಂದ ಹೊತ್ತಿ ಉರಿಯಲಾರಂಬಿಸಿದೆ. ದಾರಿ ಹೋಕರು ಕೂಡಲೇ ಅಗ್ನಿ ಶಾಮಕ ದಳದವರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದ ಪೆಟ್ಟಿಗೆ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಇದು ದುಷ್ಕರ್ಮಿಗಳ ಕೃತವಾಗಿದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap