ಬೆಂಗಳೂರು
ರಾಜ್ಯದಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆಗೆ ಸಿದ್ಧತೆ ನಡೆದಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಶಾಸಕ ಡಿ. ಸುಧಾಕರ್, ತಾವು ಮಾಜಿ ಸಚಿವ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ತಾವು ಅನಾರೋಗ್ಯದಿಂದಾಗಿ ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾವು ಯಾರನ್ನೂ ಭೇಟಿ ಮಾಡಿಲ್ಲ. ಆದರೆ ಕೆಲವು ಮಾಧ್ಯಮಗಳು ಜನಾರ್ದನ ರೆಡ್ಡಿ ಅವರನ್ನು ನಾನು ಭೇಟಿಯಾಗಿರುವುದಾಗಿ ವರದಿ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
Dear people, I am suffering from cervical disc bulge & have been suffering from intense pain. I am getting treated at the Jindal hospital past few days.
Few news channels are reporting that I have met Janardhan Reddy & I'm planning to join BJP. I can only laugh at this! (1/2)— Dr Sudhakar K (@mla_sudhakar) December 3, 2018
ತಾವು ಬಿಜೆಪಿ ಸೇರಲು ಉದ್ದೇಶಿಸಿಲ್ಲ. ಇಂತಹ ಸುಳ್ಳು ಸುದ್ದಿಗಳು ತಮಗೆ ನೋವುಂಟು ಮಾಡಿದೆ. ತಾವು ಕಾಂಗ್ರೆಸ್ ನ ಕಟ್ಟಾಳುವಾಗಿದ್ದು, ನಮ್ಮ ಪಕ್ಷದ ವಿರುದ್ಧ ಪಿತೂರಿ ಮಾಡಿದವರ ಜತೆ ಎಂದಿಗೂ ಕೈ ಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ