ನಾನು ರೆಡ್ಡಿಯನ್ನು ಭೇಟಿ ಮಾಡಿಲ್ಲ: ಸುಧಾಕರ್

ಬೆಂಗಳೂರು

        ರಾಜ್ಯದಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆಗೆ ಸಿದ್ಧತೆ ನಡೆದಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಶಾಸಕ ಡಿ. ಸುಧಾಕರ್, ತಾವು ಮಾಜಿ ಸಚಿವ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

          ಈ ಕುರಿತು ಟ್ವೀಟ್ ಮಾಡಿರುವ ಅವರು, ತಾವು ಅನಾರೋಗ್ಯದಿಂದಾಗಿ ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾವು ಯಾರನ್ನೂ ಭೇಟಿ ಮಾಡಿಲ್ಲ. ಆದರೆ ಕೆಲವು ಮಾಧ್ಯಮಗಳು ಜನಾರ್ದನ ರೆಡ್ಡಿ ಅವರನ್ನು ನಾನು ಭೇಟಿಯಾಗಿರುವುದಾಗಿ ವರದಿ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

            ತಾವು ಬಿಜೆಪಿ ಸೇರಲು ಉದ್ದೇಶಿಸಿಲ್ಲ. ಇಂತಹ ಸುಳ್ಳು ಸುದ್ದಿಗಳು ತಮಗೆ ನೋವುಂಟು ಮಾಡಿದೆ. ತಾವು ಕಾಂಗ್ರೆಸ್ ನ ಕಟ್ಟಾಳುವಾಗಿದ್ದು, ನಮ್ಮ ಪಕ್ಷದ ವಿರುದ್ಧ ಪಿತೂರಿ ಮಾಡಿದವರ ಜತೆ ಎಂದಿಗೂ ಕೈ ಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap