ಮುಂದಿನ ಲೋಕಸಭೆಗೆ ದಿಕ್ಸೂಚಿ

ದಾವಣಗೆರೆ:

        ಮಂಗಳವಾರ ಮೂರು ಲೋಕಸಭಾ ಕ್ಷೇತ್ರಗಳ ಹಾಗೂ 2 ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿರುವುದು ಮುಂದೆ ಬರಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದ್ದಾರೆ.

     ಐದು ಕ್ಷೇತ್ರಗಳಲ್ಲಿ ನಡೆದಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದು ಸಂತೋಷದಾಯಕ ಬೆಳವಣಿಗೆಯಾಗಿದೆ. ರಾಜ್ಯದ ಮಟ್ಟಿಗೆ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಗೆಲವು ಸಾಧಿಸಿರುವುದು ಬರಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಅವರು ತಿಳಿಸಿದ್ದಾರೆ. 

       ಪಂಚ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದಿಂದ ರಾಜ್ಯದಲ್ಲಿ ಮೋದಿ ಅಲೆಯಾಗಲಿ ಬಿಜೆಪಿ ಅಲೆಯಾಗಲಿ ಇಲ್ಲವೆಂದು ಮತದಾರರು ಸಾಬೀತು ಪಡೆಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಯುಪಿಎ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap