ಬೆಂಗಳೂರು:
ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರಿಗೆ ಸಚಿವ ಸ್ಥಾನ ನೀಡಿಬೇಕೆಂದು ಜೆಡಿಎಸ್ ಪರಿಶಿಷ್ಟ ಜಾತಿ ಘಟಕ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಸಿ.ಎಸ್.ಟಿ ಘಟಕದ ಉಪಾಧ್ಯಕ್ಷ ಶ್ರೀನಿವಾಸಯ್ಯ, ಪರಿಶಿಷ್ಟ ಜಾತಿ-ಪಂಗಡದ ಸಂಘಟನೆಯಲ್ಲಿ ಡಾ.ಕೆ.ಅನ್ನದಾನಿ ಅವರ ಪಾತ್ರ ಪ್ರಮುಖವಾಗಿದೆ. ಮಳವಳ್ಳಿ ಮೀಸಲು ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು ಜಾತ್ಯತೀತ ಜನತಾದಳದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ ಎಂದರು.
ಈ ಹಿಂದೆ ಮಂಡ್ಯ ಜಿಲ್ಲೆಗೆ ಮೂರು ಸಚಿವ ಸ್ಥಾನ ನೀಡಿದ ಕೀರ್ತಿ ಜನತಾದಳಕ್ಕೆ ಸೇರಿದೆ. ಆಗ ಮಳವಳ್ಳಿ ಕ್ಷೇತ್ರದಲ್ಲಿ ಬಿ.ಸೋಮಶೇಖರ್ ಸಚಿವರಾಗಿದ್ದರು. ಈಗ ಡಾ. ಕೆ.ಅನ್ನದಾನಿಯವರಿಗೆ ಸಚಿವಸ್ಥಾನ ನೀಡುವ ಮೂಲಕ ದಲಿತರ ಭಾವನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಂದಿಸಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ