ಲೋಕಸಭೆ ಚುನಾವಣೆ; ತಟಸ್ಥವಾಗಿ ಉಳಿದ ರಮೇಶ್‍ಜಾರಕಿಹೊಳಿ

ಬೆಂಗಳೂರು:

      ಲೋಕಸಭೆ ಚುನಾವಣೆಯಲ್ಲಿ ತಟಸ್ಥವಾಗಿ ಉಳಿಯಲು ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ.

       ಗೋಕಾಕ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವೂ ಪ್ರಚಾರ ಮಾಡದೇ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸದೇ ತಟಸ್ಥವಾಗಿ ಉಳಿಯಲಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಮುಂದಿನ ನಿರ್ಧಾರ ಪ್ರಟಿಸುವುದಾಗಿ ಕಾರ್ಯಕರ್ತರ ಮುಂದೆ ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

        ರಮೇಶ್ ಜಾರಕಿಹೊಳಿರ ಈ ದಿಢೀರ್ ನಡೆಯಿಂದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಿನ್ನಡೆ ಆಗಲಿದೆನ್ನಲಾಗುತ್ತಿದೆ. ಕಾಂಗ್ರೆಸ್ ಜತೆಗೆ ರಮೇಶ್ ಜಾರಕಿಹೊಳಿ ಅಂತರ ಕಾಯ್ದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ಗೋಕಾಕದಲ್ಲಿ ಸಭೆ ನಡೆಸಿದ್ದರು.ಚುನಾವಣೆಯಲ್ಲಿ ಗೋಕಾಕ್ ಉಸ್ತುವಾರಿಯನ್ನು ಉದ್ಯಮಿ ಲಖನ್ ಜಾರಕಿಹೊಳಿಗೆ ವಹಿಸಲಾಗಿತ್ತು.

        ಈ ಎಲ್ಲ ಬೆಳವಣಿಗೆ ಮಧ್ಯೆ ರಮೇಶ್‍ಜಾರಕಿಹೊಳಿ ಅವರು ಇಂದು ಬೆಂಬಲಿಗರ ಸಭೆ ನಡೆಸಿ ತಟಸ್ಥವಾಗಿ ಉಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap