ಬೆದರಿಸಿ ಅತ್ಯಾಚಾರ ನಡೆಸಿದ ಕಾಮುಕನ ಬಂಧನ

ಬೆಂಗಳೂರು

       ನೆರಮನೆಯ ಗೃಹಿಣಿಯೊಬ್ಬರ ಕುತ್ತಿಗೆ ಬಳಿ ಚಾಕು ಇಟ್ಟು ಬೆದರಿಸಿ ಅತ್ಯಾಚಾರ ನಡೆಸಿರುವ ಕಾಮುಕನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

      ಅನ್ನಪೂರ್ಣೇಶ್ವರಿ ನಗರದ ಮಹಿಳೆಯೊಬ್ಬರಿಗೆ ನೆರೆಮನೆಯ ಜಟ್ಟಪ್ಪ ಎಂಬಾತ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾನೆ.

        ಯಾರಿಗಾದರೂ ವಿಚಾರ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು ಈ ಸಂಬಂಧ ನೊಂದ ಗೃಹಿಣಿ ಅನ್ನಪೂರ್ಣೇಶ್ವರಿ ನಗರ ಪೆಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ವಿಷಯ ತಿಳಿದು ಪರಾರಿಯಾಗಿದ್ದ ಜಟ್ಟಪ್ಪನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ವೈದ್ಯನ ವಿರುದ್ದ ದೂರು

      ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ವೈದ್ಯನ ವಿರುದ್ಧ ಸಂತ್ರಸ್ಥ ವೈದ್ಯೆಯೊಬ್ಬರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

       ಮ್ಯಾಟ್ರಿಮೋನಿಯಲ್ಲಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದ ಡಾ. ವಿ.ಎಲ್ ಮನೋಜ್ ಕುಮಾರ್ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ನಂತರ ವಿವಾಹವಾಗಲು ನಿರಾಕರಿಸಿದ್ದಾನೆ ಎಂದು ಬಾಣಸವಾಡಿ ಪೊಲೀಸರಿಗೆ ದೂರು ನೀಡಲಾಗಿದೆ.ದೂರು ದಾಖಲಿಸಿಕೊಂಡ ಪೆÇಲೀಸರು ಮನೋಜ್ ವಿರುದ್ಧ ಐಪಿಸಿ ಸೆಕ್ಷನ್ 417 ಮತ್ತೆ 376 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿರಂತರ ಅತ್ಯಾಚಾರ

     ಮದುವೆ ಮಾಡಲು ಹುಡುಗನನ್ನು ಹುಡುಕುತ್ತಿದ್ದಾಗ ನನ್ನ ವಿವರವನ್ನು ಮ್ಯಾಟ್ರಿಮೋನಿಯಲ್ಲಿ ಪೋಸ್ಟ್ ಮಾಡಿದ್ದನ್ನು ನೋಡಿ ಡಾ.ವಿ.ಎಲ್ ಮನೋಜ್ ಕುಮಾರ್ ನನ್ನನ್ನು ಮದುವೆ ಮಾಡಿಕೊಳ್ಳಲು ಒಪ್ಪಿಕೊಂಡಿದ್ದ ನಂತರ ಇಬ್ಬರು ಜೊತೆಯಾಗಿ ದಿನ ಕಳೆದಿದ್ದೆವು ಎಚ್‍ಬಿಆರ್ ಲೇಔಟ್‍ನ ಕಲ್ಯಾಣನಗರದಲ್ಲಿ ಮನೆ ಮಾಡಿಕೊಂಡಿದ್ದ ಮನೋಜ್.ಅಲ್ಲಿಗೆ ಆಗಾಗ ನನ್ನನ್ನು ಕರೆಸಿಕೊಳ್ಳುತ್ತಿದ್ದನು.

        ಹೇಗಿದ್ದರು ನಾವಿಬ್ಬರು ಮದುವೆ ಆಗುತ್ತೇವೆ ಎಂದು ನಂಬಿಸಿ ನನ್ನ ಇಚ್ಚೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಮನೋಜ್ ತಂದೆ-ತಾಯಿ ಹಾಗೂ ಅವರ ಅಕ್ಕ ಇವರೆಲ್ಲರೂ ಮನೋಜ್ ಜೊತೆ ನನ್ನ ಮದುವೆ ಮಾಡಿಸುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap