ಸಿರುಗುಪ್ಪ :-
ಏನೇ ಆದರೂ ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 10ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಕರ್ನಾಟಕ ರಾಜ್ಯ ಸರಕಾರ ನಿರ್ಧರಿಸಿದೆ.ವಿಧಾನಸೌಧ ಬೆಂಗಳೂರಿನಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ, ಟಿಪ್ಪು ಜಯಂತಿ ಸಂಬಂಧ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್,ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ವಿಶ್ವಕುಮಾರ್,ಪಾಲ್ಗೊಂಡು ಟಿಪ್ಪು ಜಯಂತಿ ಆಚರಿಸಲು ಮುಖ್ಯಮಂತ್ರಿ ಈಗಾಗಲೇ ನಿರ್ಧಾರ ಖಚಿತವಾದ ಸಿದ್ಧತೆ ನಡೆಸಿ ಪ್ರಕಟಿಸಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ವಕ್ಫ್ ಮಾಜಿ ಸದಸ್ಯ ಟಿಪ್ಪು ಸುಲ್ತಾನ್ ಪ್ರಶಸ್ತಿ ಪುರಸ್ಕೃತರಾದ ಎ.ಅಬ್ದುಲ್ ನಬಿ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಶಾಂತಿ ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಎಲ್ಲರಿಗಿರಲಿ, ಏನೇ ಆದರೂ ಸರಕಾರ ಟಿಪ್ಪು ಜಯಂತಿ ಆಚರಿಸುತ್ತದೆ, ಪ್ರತಿ ವರ್ಷದಂತೆ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಈ ಬಗ್ಗೆ ಸರ್ಕಾರದ ನಿಯಮ ಹಾಗು? ರೂಪುರೇಷ ಪ್ರಕಾರವೇ ಟಿಪ್ಪು ಜಯಂತಿ ಕಾರ್ಯಕ್ರಮ ರಾಜ್ಯದಲ್ಲಿ ನಡೆಯಲಿದೆ ಎಂದು ಅಬ್ದುಲ್ ನಬಿ ಕರ್ನಾಟಕ ಸರ್ಕಾರಕ್ಕೆ ಮೈತ್ರಿಗೂ ಅಭಿನಂದಿಸಿದ್ದಾರೆ.