ಹರಪನಹಳ್ಳಿ:
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಬಾಲಕರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ `ಮತದಾನದ ಜಾಗೃತಿ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ ವೈ ಡೊಳ್ಳಿನ ಮಾತನಾಡಿ, `ಮತವನ್ನು ಯಾವುದೇ ಆಮಿಷಗಳಿಗೆ ಒಳಗಾಗಿ ಮಾರಿಕೊಳ್ಳಬಾರದು. ಕಡ್ಡಾಯ ಮತದಾನ ನಮ್ಮೆಲ್ಲರ ಜವಾಬ್ದಾರಿ ಮತ್ತು ಹಕ್ಕು ಆಗಿದೆ. ನಿಲಯಾರ್ಥಿಗಳಿಗೆ ಮತದಾನದ ಮಹತ್ವ ಬಗ್ಗೆ ಅರಿವು ಮೂಡಿಸಿದರು.ವಾರ್ಡನ್ ಬಸವರಾಜ ಮಾತನಾಡಿ, `ಜಾಗೃತ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಉಳಿವು ಸಾಧ್ಯ. ಒಂದೊಂದು ಮತವೂ ನಿರ್ಣಾಯಕ. ಹಾಗಾಗಿ ಮತ ಚಲಾಯಿಸುವ ಜತೆಗೆ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಬೇಕು’ ಎಂದು ಹೇಳಿದರು.ಈ ಸಂದರ್ಭದಲ್ಲಿ ನಿಲಯಾರ್ಥಿಗಳು, ಸಿಬ್ಬಂದಿ ವರ್ಗದವರೂ ಹಾಜರಿದ್ದರು.