ಬೆಂಗಳೂರು
ಕೆಲ ತಿಂಗಳಿಂದಷ್ಟೇ ನಿಧನ ಹೊಂದಿದ್ದ ಕೇಂದ್ರ ಮಾಜಿ ಸಚಿವ ಅನಂತ ಕುಮಾರ್ ಅವರು ಪ್ರತಿನಿಧಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರಿಯಕೃಷ್ಣ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಡಿ.ಕೆ. ಸುರೇಶ್ ಅವರ ಹೆಸರು ಸರ್ವಾನುಮತ ಪಡೆದಿವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಬೆಂಗಳೂರು ವಿಭಾಗದ ಉಸ್ತುವಾರಿ ಯಶೋಮತಿ ಠಾಕೂರ್ ಅವರ ನೇತೃತ್ವದಲ್ಲಿ ನಿನ್ನೆನಡೆದ ಸಭೆಯಲ್ಲಿ ಬೆಂಗಳೂರು ದಕ್ಷಿಣ, ಉತ್ತರ, ಕೇಂದ್ರ ಹಾಗೂ ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಕುರಿತು ನಡೆದ ಕ್ಷೇತ್ರದ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರಿಯಕೃಷ್ಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕ್ಷೇತ್ರ ದಲ್ಲಿ ಸ್ಪರ್ಧಿಸುವ ಬಗ್ಗೆ ಪ್ರಿಯಕೃಷ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಂ.ಕೃಷ್ಣಪ್ಪ ಅವರು ಇನ್ನೂ ಸಮ್ಮತಿಸಿಲ್ಲ ಎಂದು ತಿಳಿದು ಬಂದಿದೆ. ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಯುವ ಸಾಧ್ಯತೆ ಇರುವುದರಿಂದ ಪ್ರಿಯಕೃಷ್ಣ ಅವರು ಸರಿಯಾದ ಅಭ್ಯರ್ಥಿ ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದ ಎಂದು ತಿಳಿದು ಬಂದಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ