ವಾಹನಗಳಿಗೆ ಕಲಬೇರಿಕೆ ಇಂಧನ ಬಳಸಬಾರದು

ಹಾವೇರಿ

        ವಾಹನಗಳಿಗೆ ಕಲಬೇರಿಕೆ ಇಂಧನ ಬಳಸಬಾರದು ಹಾಗೂ ಕಾಲಕಾಲಕ್ಕೆ ವಾಹನಗಳ ಇಂಜಿನ್ ಟ್ಯೂನ್ ಮಾಡಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದೀಪಕ್ ಎಲ್. ಅವರು ಹೇಳಿದರು.

       ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಯೋಜಿಸಲಾದ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

       ವಾಯು ಮಾಲಿನ್ಯ ತಪಾಸಣೆ ಕೇಂದ್ರಗಳಲ್ಲಿ ವಾಹನಗಳ ತಪಾಸಣೆ ಮಾಡಿಸಿ ಪ್ರಮಾಣಪತ್ರ ಪಡೆದುಕೊಳ್ಳಬೇಕು ಹಾಗೂ ಸಮೂಹ ಸಾರಿಗೆ ಬಳಸುವುದರ ಮೂಲಕ ವಾಯುಮಾಲಿನ್ಯವನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕುರಿತು ಏರ್ಪಡಿಸಲಾದ ಪ್ರಬಂಧ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

       ಕಾರ್ಯಕ್ರಮದಲ್ಲಿ ಶಿಕ್ಷಕ ವಿದ್ಯಾಧರ ಉಜ್ಜಯನಿಮಠ, ಕಚೇರಿ ಅಧೀಕ್ಷಕ ಚಂದ್ರಶೇಖರ ಕವಲಿ, ಮೋಟಾರು ವಾಹನ ನಿರೀಕ್ಷಕ ಪ್ರಭುಸ್ವಾಮಿ ಹಿರೇಮಠ, ವಿ.ಜಿ.ನಾಯಕ, ಶ್ರೀಪಾದ ಬ್ಯಾಳಿ, ಮೆಹಬೂಬ ಹೊಟಗಾಳಿ ಹಾಗೂ ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap