ಬೆಂಗಳೂರಿನಲ್ಲಿ ಎರಡು ಮತ್ತು ಬಳ್ಳಾರಿಯಲ್ಲಿ ಒಂದು ವಾಣಿಜ್ಯಾತ್ಮಕ ನ್ಯಾಯಾಲಯಗಳ ಸ್ಥಾಪನೆ:ಕೃಷ್ಣ ಬೈರೇಗೌಡ

ಬೆಂಗಳೂರು

     ವಾಣಿಜ್ಯ ಚಟುವಟಿಕೆ ಹೆಚ್ಚಾಗಿ ವ್ಯಾಜ್ಯಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಎರಡು ಮತ್ತು ಬಳ್ಳಾರಿಯಲ್ಲಿ ಒಂದು ವಾಣಿಜ್ಯಾತ್ಮಕ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಕಾನೂನು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

      ರಾಜ್ಯದಲ್ಲಿ ವಾಣಿಜ್ಯ ವ್ಯವಹಾರಗಳ ದಾವೆಗಳ ಸುಗಮ ನಿರ್ವಹಣೆಗಾಗಿ ಈ ಮೂರು ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ವ್ಯಾಪಾರ ವಹಿವಾಟು ಸುಗಮಗೊಳಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

      ಈ ನ್ಯಾಯಾಲಯಗಳಿಗೆ ಅಗತ್ಯವಾದ ಹುದ್ದೆಗಳಿಗೂ ಸಹ ಮಂಜೂರಾತಿ ನೀಡಲಾಗಿದೆ. ಪ್ರತಿ ನ್ಯಾಯಾಲಯಕ್ಕೆ ಒಬ್ಬರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ಒಬ್ಬರು ಶಿರಸ್ತೆದಾರರು, ತೀರ್ಪು ಬರಹಗಾರರು, ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ಅಟೆಂಡರ್ ಹಾಗೂ ಜವಾನ ಸೇರಿದಂತೆ 8 ಹುದ್ದೆಗಳ ಸೃಜನೆಗೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

             ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap