ಶಿಲ್ಲಾಂಗ್:
ಸದಾ ಮಳೆ ಬರುವ ಜಾಗಗಳಲ್ಲಿ ಮೇಘಾಲಯ ಕೂಡ ಒಂದುಅಂತಹ ಜಾಗದಲ್ಲಿ ಗಣಿ ನಡೆಸುದಿರಲಿ ಅದರ ಬಗ್ಗೆ ಯೋಚಿಸುವುದು ದುಸ್ತರ ಾದರು ಜೀವನೋಪಾಯದ ದೃಷ್ಟಿಯಿಂದ ಗಣಿಯೊಂದನ್ನು ತೆರೆದಿದ್ದು ಸಾವಿರಾರು ಕುಟುಂಬಗಳು ಸಂತೃಪ್ಇಯಾಗಿದ್ದವು ಹೀಗಿರು ಸಂಭವಿಸಿದ ದಿಢೀರ್ ಪ್ರವಾಹದಿಂದಾಗಿ ಅಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಕಾರ್ಮಿಕರು ಅಪಾಯಕ್ಕೆ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಇಲ್ಲಿಯವರೆಗೂ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಮೇಘಾಲಯದ ಪಶ್ಚಿಮ ಜೈನ್ತಿಯಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯಲ್ಲಿ 13 ಮಂದಿ ಸಿಲುಕಿದ್ದು ಅವರನ್ನು ರಕ್ಷಿಸುವ ಕಾರ್ಯ ಗುರುವಾರದಿಂದ ಶನಿವಾರ ಮುಂಜಾನೆವರೆಗೂ ಮುಂದುವರೆದಿದೆ. ಪ್ರವಾಹದ ಕಾರಣ ಗಣಿಯಲ್ಲಿ ನೀರು ನುಗ್ಗಿದ್ದು 13 ಮಂದಿ ಕಾರ್ಮಿಕರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಗಣಿಯಿಂದ ನೀರನ್ನು ಹೊರಹಾಕುವಲ್ಲಿ ಸಾಧ್ಯವಾಗದ ಕಾರಣ ಇದುವರೆಗೆ ಯಾರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಮುಂಜಾನೆ ಅವಘಡದ ಸಂಗತಿ ತಿಳಿಯುತ್ತಿದ್ದಂತೆ ಗಣಿಯಿಂದ ನೀರನ್ನು ಪಂಪ್ ಮೂಲಕ ಹೊರಹಾಕಲು ಪ್ರಯತ್ನಿಸಲಾಯಿತು.