ಕೊಲ್ಲಂ
ಕೇರಳದ ಕೊಲ್ಲಂ ನಲ್ಲಿ ನಡೆದ ಸಮಾವೇಶದಲ್ಲಿ ‘ನಾವು ಪ್ರೀತಿ ಮತ್ತು ಅಹಿಂಸೆಯನ್ನು ಬಳಸಿ ನೀವು ತಪ್ಪು ಮಾಡಿದ್ದೀರಿ ಎಂಬುದನ್ನು ಅರ್ಥಮಾಡಿಸಿ ನಿಮ್ಮನ್ನು ಸೋಲಿಸುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಮತ್ತು ಈ ವಿಷಯವಾಗಿ ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ, ಆರೆಸ್ಸೆಸ್ ಮತ್ತು ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಅದೇನೆಂದರೆ, ಅವರು ಹೇಳುತ್ತಾರೆ ‘ನಾವು ನಿಮ್ಮನ್ನು ನಂಬದೆ ಇದ್ದರೆ ನಿಮ್ಮನ್ನು ತೆಗೆದುಹಾಕುತ್ತೇವೆ’ ಎಂದು. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಅಂದರೆ, ಭಾರತದಿಂದ ಕಾಂಗ್ರೆಸ್ ಅನ್ನು ತೆಗೆದುಹಾಕುವ ಬಗ್ಗೆ ಮಾತನಾಡುತ್ತಾರೆ.
ಅದಕ್ಕಾಗಿ ನಾವು ಅವರಿಗೆ ನೀವು ತಪ್ಪು ಹೇಳುತ್ತಿದ್ದೀರಿ ಎಂದು ನಿಮ್ಮ ಮನವೊಲಿಸಲು ನಾವು ಹೋರಾಟ ಮಾಡುತ್ತೇವೆ. ನಿಮ್ಮನ್ನು ಚುನಾವಣೆಯಲ್ಲಿ ಸೋಲಿಸುತ್ತೇವೆ. ನೀವು ತಪ್ಪು ಮಾಡಿದ್ದೀರಿ ಎಂಬುದನ್ನು ಸಾಬೀತುಪಡಿಸಲು ನಾವು ಪ್ರೀತಿ ಮತ್ತು ಅಹಿಂಸೆಯನ್ನು ಬಳಸುತ್ತೇವೆ’ ಎಂದು ರಾಹುಲ್ ಗಾಂಧಿ ತಿಳಿಸಿದರು. ನೀವು ಎಷ್ಟು ಬಾರಿಯಾದರೂ ನಮ್ಮನ್ನು ಹೊಡೆಯಿರಿ ಅಥವಾ ನಿಂದಿಸಿ. ನಮ್ಮಿಂದ ನಿಮಗೆ ಅಹಿಂಸಾತ್ಮಕ ಪ್ರತಿಕ್ರಿಯೆಯೇ ಬರುತ್ತದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ