ಉಗ್ರರ ಹುಟ್ಟಡಗಿಸಿದ ಭದ್ರತಾ ಪಡೆ

ಶ್ರೀನಗರ:

   ಸದಾ ಉಗ್ರರ ಉಪಟಳದಿಂದ ಪ್ರಕ್ಷ್ಯಬ್ಧವಾಗಿ  ಕುಪ್ವಾರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಒಬ್ಬ ಪಿಎಚ್‍ಡಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಉಗ್ರರನ್ನು ಸಾವನ್ನಪ್ಪಿದ್ದಾರೆ .

   ಹಂದ್ವಾರದಲ್ಲಿ ಈ ಎನ್‍ಕೌಂಟರ್ ನಡೆದಿದೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಸಂಯುಕ್ತ ಭೂಗರ್ಭಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದು ಬಳಿಕ ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಗೆ ಸೇರಿದ ಮನನ್‌ ಬಶಿರ್‌ ವಾನಿ (26) ಹಾಗೂ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.

   ಹಂದ್ವಾರದಲ್ಲಿರುವ ಸಾತುಡ್‌ ಎಂಬ ಜಾಗದಲ್ಲಿ ಉಗ್ರರು ಇರುವ ಬಗ್ಗೆ ಸುಳಿವು ಸಿಕ್ಕಿದ ಕೂಡಲೆ ಕಾರ್ಯ ಪ್ರವೃತ್ತರಾದ ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರನ್ನು ಸುತ್ತುವರಿದರು ಆಗ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಯಿತು ಮತ್ತು ಈ ಕಾಳಗದಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ ಎಂದು ವರದಿ ಬಂದಿದೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap