ನವದೆಹಲಿ
ಮುಂಬರುವಂತಹ ಲೋಕಸಭಾ ಚುನಾವಣೆಗೆ ಇನ್ನು ಉಳಿದಿರುವುದು ಕೆಲವೇ ತಿಂಗಳು ಮಾತ್ರ . ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರ ಬದಲಾವಣೆಗೆ ಮನಸ್ಸು ಮಾಡಿದ್ದಾರೆ ಎಂಬ ಊಹಾಪೋಹಗಳು ಎದ್ದಿದ್ದು . ಕಳೆದ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ಸ್ಪರ್ಧಿಸಿ,ಭರ್ಜರಿ ಬಹುಮತದೊಂದಿಗೆ ಗೆದ್ದಿದ್ದ ಅವರು.ತಮ್ಮ ಮಾತೃ ರಾಜ್ಯ ಗುಜರಾತ್ ನಿಂದ ಹೊರಗೆ ಬಂದು ನಿಂತರೆ ಮೋದಿ ಅವರಿಗೆ ಗೆಲ್ಲಲು ಸಾಧ್ಯವಿಲ್ಲ ಎಂದು ಸವಾಲೆಸದವರಿಗೆ ತಮ್ಮ ಗೆಲುವಿನ ಮೂಲಕವೇ ತಕ್ಕ ಉತ್ತರ ನೀಡಿದ್ದರು ಇನ್ನು ಅವರು ಪಡೆದ ಮತಗಳನ್ನು ನೋಡಿದರೆ 5.8 ಲಕ್ಷ ಇದರಲ್ಲಿರುವ ವಿಶೇಷವೆಂದರೆ ಪ್ರತಿಸ್ಪರ್ಧಿಯಾಗಿ ಇದ್ದಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ .ಗುಜರಾತಿನ ವಡೋದರಾ ಕ್ಷೇತ್ರದಲ್ಲೂ ಸ್ಪರ್ಧಿಸಿ ಗೆದ್ದಿದ್ದರು.
ನಂತರ ವಾರಣಾಸಿಯನ್ನು ತಮ್ಮ ಬಳಿಯೇ ಉಳಿಸಿಕೊಂಡು ವಡೋದರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಈ ವರ್ಷ ಮೋದಿಯವರು ಒಡಿಶಾದ ಪುರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಶೇ.90 ರಷ್ಟಿದೆ ಎಂದು ಒಡಿಶಾ ಬಿಜೆಪಿ ಮುಖಂಡ ಪ್ರದೀಪ್ ಪುರೋಹಿತ್ ಹೇಳಿರುವುದು ಇದೀಗ ರಾಜಕೀಯದಲ್ಲಿ ಹೊಸ ಸಂಚಲನ ಹುಟ್ಟು ಹಾಕಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ