ಎಸ್ಪಿಎಂ ನಾಮಪತ್ರ ವಾಪಸ್ : 3 ಗಂಟೆಯೊಳಗೆ ನಿರ್ಧಾರ!!!

ಬೆಂಗಳೂರು:

      ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆ ಎನ್ನಲಾಗಿದೆ.

      ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಡಿ.ಸಿ.ಎಂ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಜೆ.ಡಿ.ಎಸ್. ಮುಖಂಡರು ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮುದ್ದಹನುಮೇಗೌಡರ ಮನವೊಲಿಸುವ ಪ್ರಯತ್ನ ಮಾಡಿದ್ದರು.

      ಬಳಿಕ ಮಾತನಾಡಿದ ಸಂಸದ ಮುದ್ದಹನುಮೇಗೌಡರು, ತುಮಕೂರು ಕ್ಷೇತ್ರಕ್ಕೆ ತೆರಳಿ ಸಂಜೆ 3 ಗಂಟೆಯ ಒಳಗಾಗಿ ಅಂತಿಮ ನಾಮಪತ್ರ ಹಿಂಪಡೆಯುವ ಕುರಿತು ನನ್ನನ್ನು ಬೆಳೆಸಿದ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಕೊಳ್ಳಲಾಗುವುದು ಎಂದು ಸಂಸದ ತಿಳಿಸಿದ್ದಾರೆ.

       ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಅವರು ತಮ್ಮ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಬಳಿಕ ಮುದ್ದಹನುಮೇಗೌಡ ಹೇಳಿಕೆ ನೀಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap