ಸೋಲಿನ ಹೊಣೆ ನಾನೆ ಹೊರುತ್ತೇನೆ‌: ರಾಮುಲು

 

ಬಳ್ಳಾರಿ:

           ನಾನೇ ಸೋಲಿನ ಹೊಣೆ ಹೊರುತ್ತೇನೆ‌. ಜಿಲ್ಲೆಯ ಜನರು ನನಗೆ ಸಹಕಾರ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಇತರ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದವರ ಪ್ರಾಬಲ್ಯವಿತ್ತು. ಹೀಗಾಗಿ ಗೆದ್ದಿದ್ದಾರೆ.

      ಬಳ್ಳಾರಿ ಕ್ಷೇತ್ರದ ಸೋಲು ನಮಗಾದ ಹಿನ್ನಡೆ. ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.ಭಗವಂತ ಫಲಕೊಟ್ಟಿಲ್ಲ. ಉಗ್ರಪ್ಪ ಸರ್ಕಾರ ದುರುಪಯೋಗ ಮಾಡಿಕೊಂಡಿದ್ದಾರೆ .ಸೋತಿದ್ದೇನೆಂದು ಯಾರನ್ನೂ ದ್ವೇಷಿಸಲ್ಲ. ಜನಾದೇಶಕ್ಕೆ ನಾವು ತಲೆಬಾಗುತ್ತೇವೆ ಎಂದರು.

         ಅಲ್ಲದೆ ಜನರು ನನ್ನನ್ನು ತಿರಸ್ಕರಿಸಿದ್ದು, ಇದು ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap